Friday, February 8, 2019

ಮೆಹ್ತಾ Killed ಮೆಹ್ತಾ! - Part 3

Continued..


ಹಣೆಗೆ ಗುರಿಯಿಟ್ಟು ಹೊಡೆದ ಆ ಹೊಡೆತ ಕ್ಷಣಮಾತ್ರದಲ್ಲೇ ದೇಹವನ್ನು ಹೆಣವನನ್ನಾಗಿಸುತ್ತದೆ! ಆತನ ಕೈ ಮಾತ್ರ ಒಂದೇ ಸಮನೆ ನಡುಗಹತ್ತುತ್ತದೆ.

ಆ ದಿನ ಕಂಪನಿಯ ಪ್ರತಿಯೊಬ್ಬರನ್ನೂ ಆಫೀಸಿನ ಒಳಗೆಯೇ ಇರುವಂತೆ ಸೂಚಿಸಲಾಗಿದ್ದಿತು. ಸತ್ತು ಬಿದ್ದಿದ್ದ ಭುಜಂಗ್ ರಾವಿನ ಹೆಣವನ್ನು ತೆಗೆದ ನಂತರ ಪೊಲೀಸರು ದೀಪಕ್ ಮೆಹ್ತಾನನ್ನೂ ಅರೆಸ್ಟ್ ಮಾಡಿ ಕರೆದೊಯ್ದರು. ಆ ವಿಚಿತ್ರ ಘಟನೆಯನ್ನು ಕಂಡು ನಾಲ್ಕೈದು ಜನರು ಮೂರ್ಛೆ ತಪ್ಪಿ ಆಸ್ಪತ್ರೆ ತಲುಪಿದ್ದೂ ಉಂಟು! ನಂತರ ಒಬ್ಬೊಬ್ಬರನ್ನೇ ಕರೆದು ಇನ್ವೆಸ್ಟಿಗೇಷನ್ ಶುರುಮಾಡಿದ ಪೊಲೀಸರು ಅದನ್ನು ಮುಗಿಸುವಷ್ಟರಲ್ಲಿ ರಾತ್ರಿ ಹತ್ತಾಗಿದ್ದಿತು. ಆಗ ತಿಳಿದ ಮಹತ್ವದ ವಿಷಯವೇನೆಂದರೆ ಕಳೆದ ಎರಡು ವಾರಗಳಿಂದ ಸಿಸಿಟಿವಿ ಕ್ಯಾಮರಗಳೆಲ್ಲವೂ ಆಫ್ ಆಗಿದ್ದೂ ವಿಷಯವನ್ನು ಬುಜಂಗ್ರಾವಿನ ಗಮನಕ್ಕೆ ಹಲವು ಬಾರಿ ತಂದರೂ ಆತ ಬೇಕಂತಲೇ ಅದನ್ನು ಸರಿಪಡಿಸದಿದ್ದದು.

ಘಟನೆ ನೆಡೆದು ಎರಡು ದಿನಗಳ ನಂತರ ಜಡ್ಜಿನ ಆದೇಶದಂತೆ ಕಂಪನಿಯ ಎಲ್ಲರನ್ನೂ ಮತ್ತೊಂದು ಸುತ್ತಿನ ವಿಚಾರಣೆಗೆ ಕೋರ್ಟಿಗೆ ಬರುವಂತೆ ಹೇಳಲಾಗುತ್ತದೆ. ಹಲವಾರು ಸಾಕ್ಷಿಗಳನ್ನು ನ್ಯಾಯಮೂರ್ತಿಗಳ ಮುಂದೆಯೇ ವಿಚಾರಿಸಬೇಕೆಂದು ಆಜ್ಞೆಯಾಗಿರುತ್ತದೆ. ಜೀವ ಹೋದರೂ ನಾ ಕೋರ್ಟ್ ಗೆ ಬರೆನು ಎಂದು ಕೂತ ಮಹೇಶನನ್ನು ಮಕ್ಕಳನ್ನು ಮೊದಲ ಬಾರಿಗೆ ಶಾಲೆಗೆ ಸೇರಿಸುವ ಹಾಗೆ ಅಜಯ್ ಕಾಡಿ ಬೇಡಿ ಕರೆತಂದಿದ್ದ . ವಿಚಾರಣೆ ಶುರುವಾಗಿ ಬಹಳ ಸಮಯ ಕಳೆದರೂ ಯಾರೊಬ್ಬರಿಗೂ ಕೊಲೆಯ ಹಾಗು ಸಾವಿನ ಹಿಂದಿದ್ದ ನಿಖರ ಉತ್ತರ ತಿಳಿಯಲಿಲ್ಲ. ಅತ್ತ ಕಡೆ ಮೆಹ್ತಾ ಒಂದೂ ಪದವನ್ನು ಮಾತನಾಡದೆ ಕಲ್ಲುಗುಂಡಿನಂತೆ ನಿಂತಿದ್ದ. ಅಲ್ಲದೆ ಆತ ಮಾನವನೋ ಅಥವ ಸತ್ತ ಹೆಣಕ್ಕೆ ಆತ್ಮ ಸೇರಿ ನೆಡೆಸುತ್ತಿರುವ ಕೃತ್ಯವೋ ಎಂಬ ಭಯದೊಂದಿಗೆ ಯಾರೊಬ್ಬರೂ ಅವನ ವಿರುದ್ಧವಾಗಿ ಒಂದಿನಿತೂ ಕೆಟ್ಟದಾಗಿ ಹೇಳಿಕೆಯನ್ನು ಕೊಡಲಿಲ್ಲ. ಹತ್ತಿರವೂ ಸುಳಿಯಲಿಲ್ಲ. 'ತುಂಬಾ ಒಳ್ಳೆಯ ವ್ಯಕ್ತಿ', 'ಯಾರಿಗೂ ನಿಂದಿಸುತ್ತಿರಲಿಲ್ಲ', 'ಎಲ್ಲರನ್ನೂ ಸಮನಾಗಿ ಕಾಣುತ್ತಿದ್ದರು' ಎಂಬ ಗೌರವ ಸೂಚಕಗಳೇ ಎಲ್ಲರ ಹೇಳಿಕೆಗಳಲ್ಲೂ!

ತನ್ನ ಸರದಿ ಬರುತ್ತದೆ ಎಂದು ಕಾದು- ಕಾದು ಹೈರಾಣಾದ ಅಜಯ್ ಯಾವಾಗ ತನ್ನ ಹೆಸರನ್ನು ಕರೆಯಲಿಲ್ಲವೋ ಆಗ ಕೊಂಚ ಕುಪಿತಗೊಂಡವಂತೆ ಕೂಡಲೇ ಎದ್ದು ನಿಂತು ಅರಚಿತ.

'Would you please stop this Nonsense?!!'

ಗುಜುಗುಜುಗುಡುತ್ತಿದ್ದ ಸದ್ದು ಒಮ್ಮೆಲೇ ತಣ್ಣಗಾಗುತ್ತದೆ. ತಲೆತಗ್ಗಿಸಿಕೊಂಡು ನಿಂತಿದ್ದ ಮೆಹ್ತಾ ಕೂಡ ಅಜಯ್ ನನ್ನು ಒಮ್ಮೆ ನೋಡಿದ.

'ರೀ ಮಿಸ್ಟರ್, ಯಾರ್ರೀ ನೀವು? ನಿಮಗೇನಾದ್ರೂ ಹೇಳೋದಿದ್ರೆ ಕಟಕಟೆಯ ಮುಂದೆ ಬಂದು ಹೇಳಿ. Its not a Fish Market!' ಎಂದ ಜಡ್ಜಿನ ಮಾತಿಗೆ ಉತ್ತರಿಸುವಂತೆ, ಸಿಟ್ಟಿನ ಚಹರೆಯಲ್ಲಿಯೇ ಕಟಕಟೆಗೆ ಬಂದು ನಿಂತ ಅಜಯ್ ಕೊಂಚ ಹೊತ್ತು ಸುಮ್ಮನಾಗಿ ದೀಪಕ್ ಮೆಹ್ತಾನನ್ನೂ ಹಾಗು ಕೆಳಗೆ ನಿಂತಿದ್ದ ಸಬ್ ಇನ್ಸ್ಪೆಕ್ಟರ್ ಒಬ್ಬನನ್ನು ನೋಡಿದ.

'Your Honor, ನಾನು ಹೀಗ ಹೇಳಹೊರಟಿರುವ ವಿಷಯದ ಬಗ್ಗೆ ನನ್ನ ಬಳಿ ಸಂಪೂರ್ಣ ಸಾಕ್ಷ್ಯಾಧಾರಗಳಿವೆ ಹಾಗು ಯಾವುದನ್ನೂ ಊಹಿಸಿಕೊಂಡಾಗಲಿ, ಕಲ್ಪಿಸಿಕೊಂಡಾಗಲಿ ನಾನು ಹೇಳುತ್ತಿಲ್ಲ' ಎನ್ನುತ್ತಾನೆ.

'For your kind Information, ಅಂದು ಕಂಪನಿಯ ಮೇಲಿಂದ ಬಿದ್ದು ಸತ್ತದ್ದು ಬೇರ್ಯಾರು ಅಲ್ಲ ಅದು ಬುಜಂಗ್ ರಾವಿನ ಒಬ್ಬನೇ ಮಗ ನಿಖಿಲ್ ರಾವ್!!’’

ಕೋರ್ಟ್ನ ತುಂಬಾ ಮತ್ತೊಮೆ ಗುಸು ಗುಸು ಶುರುವಾಯಿತು. ಮಹೇಶ ತನ್ನ ಕಣ್ಣುಗಳನ್ನು ಸಾಧ್ಯವಾದಷ್ಟು ಹಿಗ್ಗಿಸಿ ಅಜಯ್ ನನ್ನೇ ನೋಡುತ್ತಿದ್ದ. ಮಗುವೊಂದಕ್ಕೆ ಮೊದಲ ಬಾರಿಗೆ ಜಾದೂವನ್ನು ತೋರಿಸಿದಂತೆ.

‘ಅಲ್ಲದೆ ಅದು ಯಾವುದೇ ಬಗೆಯ ಆತ್ಮಹತ್ಯೆಯಾಗಲಿ ಎಂತಹದ್ದು ಇಲ್ಲ! That was a pure Murder!’

'ಸತ್ತ್ತಿದ್ದು ದೀಪಕ್ ಮೆಹ್ತಾ ಎಂಬ ಪೊಲೀಸ್ ರಿಪೋರ್ಟ್ ಇದಿಯಲ್ರಿ'

'ಹೌದು ಸಾರ್, ಪೊಲೀಸ್ ರಿಪೋರ್ಟ್ ಹೇಳಿದ್ದ ಮಾತ್ರಕ್ಕೆ ಸತ್ಯ ಸುಳ್ಳಾಗೋದಿಲ್ಲ'

ಜಡ್ಜ್ 'ಆರ್ಡರ್ .. ಆರ್ಡರ್ ' ಎಂದ ನಂತರ ಅಜಯ್ ಮುಂದುವರೆಸಿ ತಾನು ಆ ದಿನ ರಾತ್ರಿ ಚೇರಿನ ಮೇಲೆ ಮಲಗಿ ತಡವಾದರಿಂದ ಆಫೀಸಿನಲ್ಲಿಯೇ ಕಳೆಯಬೇಕಾಗಿ ಬಂದು, ಹೊರಡುವ ಸಮಯಕ್ಕೆ ಆಕೃತಿಯೊಂದು ಭುಜಂಗರಾವಿನ ಕೋಣೆಯ ಒಳಗೆ ವಿಚಿತ್ರವಾಗಿ ಸದ್ದನು ಮಾತನಾಡುತ್ತಾ ಏನನ್ನೋ ಮಾಡುತ್ತಿರುವುದ ಕಾಣುತ್ತಾನೆಂದು ಹೇಳುತ್ತಾನೆ. ಮಾರನೇ ದಿನ ಅದು ಏನೆಂದು ತಿಳಿಯಲು ಇಂದೂ ಆ ಆಕೃತಿ ಬರಬಹುದೆಂಬ ಊಹೆಯ ಮೇರೆಗೆ ಒಂದೆರೆಡು ಸಣ್ಣ ಕ್ಯಾಮೆರಾ ಹಾಗು ಮೈಕ್ರೋಫೋನನ್ನು ಭುಜಂಗರಾವ್ ಬರುವ ಮೊದಲೇ ಆತನ ಕ್ಯಾಬಿನಲ್ಲಿ ಯಾರಿಗೂ ಕಾಣಿಸದಂತೆ ಅಳವಡಿಸುತ್ತಾನೆ.

ಕೆಲದಿನಗಳ ಹಿಂದೆ ಅವನ್ನು ತಂದು ತನ್ನ ಲ್ಯಾಪ್ಟಾಪ್ ಗೆ ಹಾಕಿ ನೋಡಿದಾಗ…..

ಆ ದಿನ ಬೆಳಗ್ಗೆ ಭುಜಂಗರಾವ್ ಆಫೀಸಿಗೆ ಬಂದ ಸ್ವಲ್ಪ ಸಮಯದಲ್ಲೆ ದೀಪಕ್ ಮೆಹ್ತಾ ಕೂಡ ಆಫೀಸಿಗೆ ಬರುತ್ತಾರೆ. ಆದರೆ ಬಂದ ದೀಪಕ್ ಕೂಡಲೇ ತನ್ನ ಮುಖದ ಮೇಲಿದ್ದ ಪೌಡರು ಮೆತ್ತಿದ್ದ ಚರ್ಮದ ಮುಖವಾಡವನ್ನು ತೆಗೆದು 'ಡ್ಯಾಡ್, ನನ್ನ್ ಕೈಯಲ್ಲಿ ಆಗಲ್ಲ.. ಇನ್ನು ಎಷ್ಟ್ ದಿನ ಅಂತ ಇದೆಲ್ಲ. ಬೇಗ ಅದೇನ್ ಡಾಕ್ಯುಮೆಂಟ್ಸ್ ಇದ್ದವೊ ಎಲ್ಲ ಮುಗ್ಸು..' ಎಂದು ಹೇಳಿದಾಗ ಭುಜಂಗ ರಾವ್, ದೀಪಕ್ ಮೆಹ್ತಾ ಫಾರಿನ್ ನಿಂದ ಬರಲು ಇನ್ನೂ ಸ್ವಲ್ಪ ದಿನ ಆಗುತ್ತೆ, ಬಂದ ದಿನವೇ ಆತನನ್ನು ಮುಗಿಸಬೇಕೆಂದು ಹೇಳುತ್ತಾನೆ. ನಂತರ ಆತನ ಹೆಣವನ್ನು ತಂದು ಆದರ ಥಂಬ್ ಇಂಪ್ರೆಷನ್ ಎಲ್ಲವನ್ನು ತೆಗೆದುಕೊಂಡು ಇಡೀ ಕಂಪನಿಯ ಮಾಲೀಕತ್ವವನ್ನು ತಮ್ಮದಾಗಿಸಿಕೊಂಡು ಆ ಹೆಣವನ್ನು ಆಫೀಸಿನ ಮೇಲ್ಚಾವಣಿಯಿಂದ ದಬ್ಬುವುದಾಗಿಯೂ ಹಾಗು ಅದು ಆತ್ಮಹತ್ಯೆ ಎಂಬುವಂತೆ ತೋರಿಸುವುದಾಗಿಯೂ ಸಂಚನ್ನು ರೂಪಿಸುತ್ತಾರೆ.

ಇತ್ತಕಡೆ ತಾನು ಹೇಳಿದ ದಿನಕ್ಕಿಂತ ಮೊದಲೇ ಬಂದ ದೀಪಕ್ ಹೋಟೆಲೊಂದರಲ್ಲಿ ಉಳಿದುಕೊಳ್ಳುತ್ತಾರೆ. ದಿನ ರಾತ್ರಿ ಆಫೀಸಿಗೆ ಬರುವುದು ಹಾಗು ದೀಪಕ್ ಮೆಹ್ತಾನ ಅಕೌಂಟ್ನಿಂದ Purchase Order ಗಳನ್ನು ಅನುಮೋದಿಸಿ ಅವನ್ನು ಮಾರಿ ಬಂದ ಹಣವನ್ನೂ ಕಂಪನಿಯ ಉದ್ಯೋಗಿಗಳಿಗೇ ಬೋನಸ್ ರೂಪದಲ್ಲಿ ನೀಡತೊಡಗುತ್ತಾರೆ. ನಿಖಿಲ್ ಹೇಗೆ ಸತ್ತನೋ I Dont know. ಅಂದು ನಿಖಿಲ್ ನ ಹೆಣ ಕೆಳಗ್ಗೆ ಬಿದ್ದ ಸಮಯಕ್ಕೆ ಸರಿಯಾಗಿ ಆಫೀಸಿಗೆ ಬಂದ ಬುಜಂಗ್ ರಾವ್ ಅದು ತನ್ನ ಸ್ವಂತ ಮಗನ ಹೆಣವೆಂಬುದನ್ನೂ ಅರಿಯದೇ ಪೊಲೀಸರನ್ನು ಒಳ ಕರೆದುಕೊಂಡು ಯಾವುದೇ ಇನ್ವೆಸ್ಟಿಗೇಷನ್ ಇಲ್ಲದೆಯೆ ಸ್ಯುಸೈಡ್ ಕೇಸಿನಲ್ಲಿ ವಿಚಾರಣೆಯನ್ನು ಮುಗಿಸಬೇಕೆಂದು ಒಪ್ಪಿಸುತ್ತಾನೆ. ಭುಜಂಗ್ ರಾವ್ ಹಾಗು ಮಗ ನಿಖಿಲ್ ಕೊಲೆಯ ಸಂಚನ್ನು ರೂಪಿಸಿದರ ಬಗ್ಗೆ ದೀಪಕ್ ಮೆಹ್ತಾಗೆ ಹೇಗೆ ತಿಳಿಯಿತೋ ನಾ ಕಾಣೆ. ಅಲ್ಲದೆ ದೀಪಕ್ ಮೆಹ್ತಾ ಕೂಡ ದಿನ ರಾತ್ರಿ ಬುಜಂಗ್ ರಾವಿನ ಚಿನ್ನದ ಅಂಗಡಿಗಳಿಗೆ ಮಾರುವೇಷದಲ್ಲಿ ತೆರಳಿ ಪ್ರತಿದಿನ ಚೂರು ಚೂರೇ ಚಿನ್ನದ ಪುಡಿಯಗಳನ್ನು ಕದ್ದು ಅದರಿಂದ ಗುಂಡೊಂದನ್ನು ತಯಾರಿಸಿದನ್ನು ತಾನು ಸ್ವತಃ ಅವರನ್ನು ಹಿಂಬಾಲಿಸಿ ರೆಕಾರ್ಡ್ ಮಾಡಿದ್ದಾಗಿಯೂ ಹಾಗು ನಿನ್ನೆ ಭುಜಂಗರಾವಿನ ತಲೆಯನ್ನೊಕ್ಕಿದ್ದು ಅದೇ ಚಿನ್ನದ ಗುಂಡೆಂದು ಹೇಳಿ ಅಜಯ್ ತನ್ನ ಬಳಿ ಇದ್ದ ಎಲ್ಲ ವಿಡಿಯೋ ಕ್ಲಿಪ್ ಗಳನ್ನು, ಇತರೆ ಸಾಕ್ಷಾಧಾರಗಳನ್ನು ಕೋರ್ಟಿನಲ್ಲಿ ಹಾಜರುಪಡಿಸುತ್ತಾನೆ.

ಅಲ್ಲಿಯವರೆಗೂ ಸುಮ್ಮನೆ ನಿಂತಿದ್ದ ದೀಪಕ್ ಮೆಹ್ತಾ ಕೂಡಲೇ ಕಟಕಟನೆ ಹಲ್ಲನ್ನು ಕಡಿಯ ಹತ್ತುತ್ತಾನೆ. ಚೂರಿ ಮಸೆಯುವಂತಹ ಆ ಭಯಂಕರ ಸದ್ದನ್ನು ಕೇಳಿದ ಜನರು ಅಕ್ಷರಸಹ ಕಲ್ಲಿನ ವಿಗ್ರಹವಾಗುತ್ತಾರೆ.

'Yes….!! ನಾನೇ ಆ ಬುಜಂಗನನ್ನು ಸಾಯಿಸಿದ್ದು !!' ಎಂದು ಭಯಂಕರವಾಗಿ ಚೀರಿದಾಗ ಜಡ್ಜ್ ಕೂಡ 'ಆರ್ಡರ್ .. ಆರ್ಡರ್' ಎಂದೇಳಿ ಆತನನ್ನು ಶಾಂತವಾಗಿಸುವುದನ್ನು ಮರೆತರು. ಇಡೀ ಕೋರ್ಟಿನ ಕೋಣೆಯೇ ಪ್ರತದ್ವನಿಸುವಂತಿದ್ದ ಆ ಸದ್ದನ್ನು ಕೇಳಿ ಹೊರಗಡೆಯಿದ್ದ ಜನರೂ ಒಳಬಂದು ಜಮಾವಣೆಗೊಳ್ಳತೊಡಗಿದರು.

'ಬ್ಲಡಿ ಭುಜಂಗ .. ನಮ್ಮ ಮನೆ ಅನ್ನ ತಿಂದು ನಮ್ಮ ಮನೆಗೇ ದ್ರೋಹ ಬಗೆದ Scoundrel.. ಇಪ್ಪತ್ತು ವರ್ಷದ ಹಿಂದೆ ನಾನು ಓದಲು ಹೊರದೇಶಕ್ಕೆ ಹೋದಾಗ ನಮ್ಮ ಮನೆಯ ಮ್ಯಾನೇಜರ್ ಆಗಿದ್ದ ಈತ ಸಿಗ್ನೇಚರ್ ಫೋರ್ಜರಿ ಮಾಡಿ ನಮ್ಮ ಮನೆ, ತೋಟ ಹಾಗು ಕಂಪನಿಯನ್ನೂ ತನ್ನ ಹೆಸರಿಗೆ ಮಾಡಿಕೊಂಡು, ಅಪ್ಪನನ್ನು ಕೊಂದು ಅಮ್ಮನಿಗೂ ಚೂರಿ ಹಾಕಿದ.. ಆ ನೋವಿನಲ್ಲೂ ಅಮ್ಮ ಮೈಕ್ ರೆಕಾರ್ಡರ್ ಅನ್ನು ಆನ್ ಮಾಡಿ ಎಲ್ಲ ವಿಷಯವನ್ನು ರೆಕಾರ್ಡ್ ಮಾಡಿ ಆ ಕ್ಯಾಸೆಟ್ ಅನ್ನು ಬಚ್ಚಿಟ್ಟಳು. ಆಕೆಯನ್ನು ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಿದರೂ ಅದು ಪ್ರಯೋಜನವಾಗದೇ ಮಾರ್ಗ ಮಧ್ಯದಲ್ಲಿಯೇ ಆಕೆ ಕೊನೆಯುಸಿರೆಳೆದಳು. ಯಾರೊಬ್ಬರಿಗೂ ಆ ಕೊಲೆಯನ್ನು ಮಾಡಿದ್ದು ಭುಜಂಗನೇ ಎಂದು ತಿಳಿಯಲೇ ಇಲ್ಲ. ಅಪ್ಪಅಮ್ಮರ ಅಂತ್ಯ ಸಂಸ್ಕಾರಕ್ಕೆ ಬಂದು ಎದೆಬಡಿಕೊಂಡು ಅಳುತ್ತಿದ್ದ ನನಗೆ ಆ ಕ್ಯಾಸೆಟ್ ದೊರೆತರೂ ಅದನ್ನು ನಾನು ತಿಂಗಳುಗಳ ನಂತರ ವಿದೇಶಕ್ಕೆ ತೆರಳಿದ ಮೇಲೆಯೆ ಹಾಕಿ ಕೇಳಿದೆ. ಕೇಳಿ ರಕ್ತ ಕುದಿಯತೊಡಗಿತು. ಜೊತೆಗೆ ಅಮ್ಮನ ಕೊನೆಯ ಪದಗಳ ತೊದಲು ನುಡಿಗಳು. ದುಃಖ ಸಿಟ್ಟನ್ನು ಹುಟ್ಟುಹಾಕಿತು. ಆದರೆ ಸಿಟ್ಟು ಬೇಕಾಬಿಟ್ಟಿಯಾಗಿರದೆ ಗುರಿಯನ್ನು ಸ್ಪಷ್ಟವಾಗಿಸಿತು. ಆಗ ಒಂದು ವಿಷಯವನ್ನು ತೀರ್ಮಾನಿಸಿದೆ. ಇದನ್ನು ಪೊಲೀಸರಿಗೆ ತಿಳಿಸಿ ಆತನನ್ನು ಜೈಲಿಗೆ ಅಟ್ಟುವುದ ಬಿಟ್ಟು ಅಪ್ಪಅಮ್ಮರ ಮಗನಾಗಿ ಆತನನ್ನು ಕೊಂದೇ ನನ್ನ ಸೇಡನ್ನು ತೀರಿಸಿಕೊಳ್ಳುತ್ತೀನಿ ಹಾಗು ಅಪ್ಪ ಮಾಡಿಟ್ಟ ಅಷ್ಟೂ ಆಸ್ತಿಯನ್ನು ಹಾಗೆಯೆ ವಾಪಸ್ಸು ಪಡೆಯುತ್ತೀನಿ ಎಂದುಕೊಂಡು. ಅಂದು ಅಂತ್ಯಸಂಸ್ಕಾರಕ್ಕೆ ಹೋಗಿದ್ದಾಗ ತನ್ನ ಸ್ವಂತ ಪೋಷಕರನ್ನೇ ಕಳೆದುಕೊಂಡ ಮಕ್ಕಳಂತೆ ಅತ್ತು ನಟಿಸುತ್ತಿದ್ದ ಭುಜಂಗರಾವನ್ನು ಕಂಡು ಅಯ್ಯೋ ಎಂದುಕೊಂಡಿದ್ದೆ ಅಲ್ಲದೆ ಆತ ಹೇಳಿದ ಕಾಗದ ಪತ್ರಗಳೆಲ್ಲ ಮೇಲೆಯೂ ಸಹಿ ಹಾಕಿದೆ. ನಂತರವೇ ತಿಳಿದದ್ದು ಆತ ನಮ್ಮ ಅಷ್ಟೂ ಆಸ್ತಿಯ ಪಾಲುದಾರನಾಗಿದ್ದನೆಂದು ! ಆದರೆ ಆತ ಅದನ್ನು ಎಲ್ಲಿಯೂ ಹೇಳದೆ ಇಲ್ಲಿಯವರೆಗೂ ಗೌಪ್ಯವಾಗಿಟ್ಟುಕೊಂಡು ಬಂದಿದ್ದ. ಊರ ಆಸ್ತಿಗೆ ಮತ್ತೊಬ್ಬ ಮ್ಯಾನೇಜರ್ ಅನ್ನು ನೇಮಿಸಿ ಸಿಟಿಯ ಈ ಕಂಪನಿಯನ್ನು ತಾನೇ ಖುದ್ದಾಗಿ ನೆಡೆಸತೊಡಗಿದ. ನಾನೂ ಕಾದೆ. ಹತ್ತು ಕೋಟಿ ಬೆಲೆಬಾಳುವ ಕಂಪನಿಯಯನ್ನು ನೂರು ಕೋಟಿಗೆ ತಂದು ನಿಲ್ಲಿಸಿದ ಆತನ ಚತುರತೆಯನ್ನು ಮಾತ್ರ ಮೆಚ್ಚಲೇಬೇಕು. ನಾನು ಎಲ್ಲಿಯವರೆಗು ಬದುಕಿರುತ್ತೇನೆಯೋ ಅಲ್ಲಿಯವರೆಗೂ ಅರ್ಧ ಆಸ್ತಿಯ ಒಡೆಯನಾಗಿಯೇ ಇರದನ್ನು ಸಹಿಸಲಾರದ ಆತ ನನ್ನನ್ನು ಭಾರತಕ್ಕೆ ಕರೆಸಿ ಮುಗಿಸಿಬಿಡುವ ನಾಟಕವನ್ನು ಆಡುತ್ತಾನೆ. ಆದರೆ ನಾನು ಇಪ್ಪತ್ತು ವರ್ಷದಿಂದ ಈತನ ಒಂದೊಂದು ನಡೆಯನ್ನೂ ಕೂಲಂಕುಷವಾಗಿ ಗಮನಿಸಲು ಒಂದು ನೆಟ್ವರ್ಕ್ ಅನ್ನೇ ಸೃಷ್ಟಿಸಿಕೊಂಡಿದ್ದೆ. ಬೇಕಂತೆಲೆ ನನ್ನ ವಿದೇಶಿ ಬಿಸಿನೆಸ್ ನಷ್ಟಗೊಂಡಿದೆ ಎಂದು, ಸಾಲ ಹೆಚ್ಚಾಗಿ ಭಾರತಕ್ಕೆ ಮರಳುತ್ತಿದ್ದೇನೆಂದು ಹುಸಿ ಸುದ್ದಿಯನ್ನು ಹಬ್ಬಿಸಿದೆ. ಅದನ್ನು ನಂಬಿದ ಭುಜಂಗ ನಾನು ಬರುವ ದಿನದಂದೇ ನನ್ನನ್ನು ಮುಗಿಸುವ ಪ್ಲಾನನ್ನು ಮಗನೊಟ್ಟಿಗೆ ಸೇರಿ ಮಾಡಿಕೊಳ್ಳುತ್ತಾನೆ. ಆದರೆ ನಾನು ಬರುವ ಮೊದಲೇ ವಿದೇಶದಲ್ಲಿದ್ದ ಹೆಚ್ಚು ಕಡಿಮೆ ನನ್ನದೇ ವಯಸ್ಸಿನ ಆತನ ಮಗನನ್ನು ಕರೆಸಿ ಆತನಿಗೆ ನನ್ನನ್ನು ಹೋಲುವ ಮುಖವಾಡವನ್ನು ಹಾಕಿ ಪ್ರತಿದಿನ ಆಫೀಸಿಗೆ ಕರೆಸಿ ಆತನೇ ದೀಪಕ್ ಮೆಹ್ತಾ ಎಂದು ಎಲ್ಲರಲ್ಲೂ ನಂಬಿಕೆ ಹುಟ್ಟಿಸುತ್ತಾನೆ. ಅಂತಹ ಹತ್ತಾರು ನನ್ನನ್ನು ಹೋಲುವ ಮುಖವಾಡಗಳನ್ನು ಮಾಡಿಸಿ ಇಟ್ಟುಕೊಂಡಿರುತ್ತಾನೆ. ಹಾಗು ಬೋರ್ಡ್ ಮೀಟಿಂಗ್ ನಲ್ಲಿ ನಾನು ಕಂಪನಿಯ ಎಲ್ಲ ಷೇರನ್ನು ಮೆಹ್ತಾನಿಗೆ ಮಾರಿ ಹಣವನ್ನು ವಿದೇಶದಲ್ಲಿರುವ ಸಾಲವನ್ನು ತೀರಿಸಲು ವಿನಿಯೋಗಿಸುವುದಾಗಿ ಹೇಳಿಸುತ್ತಾನೆ. ಅಂತೆಯೇ ನನ್ನ ಸಹಿಯನ್ನು ನಕಲು ಮಾಡಿ ಕಾಗದ ಪತ್ರವನ್ನೆಲ್ಲವನ್ನೂ ತಯಾರಿಸಿದ. ಆಗ ಹೆಚ್ಚುಕಡಿಮೆ ಕಂಪನಿ ಭುಜಂಗಾರವಿನದ್ದೆ ಆಗಿದ್ದಿತು. ನಾನು ಬರುವ ದಿನ ಏರ್ಪೋರ್ಟಿನಿಂದ ರಾತ್ರಿಯೇ ಏನಾದರು ಕಾರಣ ಹೇಳಿ ಆಫೀಸಿಗೆ ಕರೆಸಿ, ಸಾಯಿಸಿ, ಮುಂದಕ್ಕೆ ಬೇಕಾಗುವ ಬೆರಳ ಗುರುತು ಇತ್ಯಾದಿಗಳೆಲ್ಲವನ್ನು ಕಾಗದ ಪತ್ರಗಳ ಮೇಲೆ ಹಾಕಿಸಿ ಕೊನೆಗೆ ಸತ್ತ ಹೆಣವನ್ನೇ ಕೆಳಗೆ ತಳ್ಳಿ ಆತ್ಮಹತ್ಯೆಯ ಪಟ್ಟಿಯನ್ನು ಕಟ್ಟುವುದು ಅವರುಗಳ ಪ್ಲಾನ್ ಆಗಿದ್ದಿತು! ಆದರೆ ನಾನು ಅದಾಗಲೇ ಭಾರತಕ್ಕೆ ಬಂದಿರುವುದಾಗಲಿ, ಹೋಟೆಲಿನಲ್ಲಿ ತಂಗಿ ಅವರನ್ನು ಇಂಚಿಂಚ್ಚು ನಡೆಯನ್ನು ಗಮನಿಸುತ್ತಿರುವುದಾಗಲಿ ಅವರಿಗೆ ತಿಳಿದಿರಲಿಲ್ಲ. ನಾನೇ ವೇಷಮರೆಸಿ ಪ್ರತಿದಿನ ಆಫೀಸಿಗೆ ರಾತ್ರಿಯ ಸಮಯದಲ್ಲಿ ನುಗ್ಗಿ ಭುಜಂಗನ ಕಂಪ್ಯೂಟರನ ಒಳಹೊಕ್ಕು ಅಷ್ಟೂ ದಾಖಲೆಗಳನ್ನು ನಕಲು ಮರುಸೃಷ್ಟಿಸಿದೆ. ಎಲ್ಲಿಯವರೆಗೂ ಎಂದರೆ ಇಂದು ಇಡೀ ಕಂಪನಿಯ ಒಡೆಯನ ಹೆಸರು ನನ್ನದೇ ಆಗಿದೆ. ಪಾಪ ಭುಜಂಗನಿಗೆ ಸಾಯುವಾಗಲೂ ಆ ವಿಷಯ ತಿಳಿಯಲಿಲ್ಲ ಎಂದು ಗಹಗಹನೇ ನಗುತ್ತಾನೆ.

ನಂತರ ಮುಂದುವರೆಸಿ, ನಮ್ಮ ತಂದೆ ಮಹಾ ತ್ಯಾಗಮಯಿ. ಅಂದು ತಿನ್ನಲು ಕೂಳಿಲ್ಲದೆ ಹಳ್ಳಿಯಲ್ಲಿ ಅಲೆಯುತ್ತಿದ್ದ ಭುಜಂಗನನ್ನು ಕರೆಸಿ ಕೆಲಸಕೊಟ್ಟು ಮ್ಯಾನೇಜರ್ನ ಹುದ್ದೆಯನ್ನು ಕೊಟ್ಟರೂ ತನ್ನ ನಾಯಿಬುದ್ಧಿಯನ್ನು ತೋರಿಸಿದ ಆತ. ಆದರಿಂದ ನಾನೇ ಖುದ್ದಾಗಿ ಕಂಪನಿಯ ಹಣದಲ್ಲೇ ಉದ್ಯೋಗಿಗಳಿಗೆ ಎರಡು ವರ್ಷದ ಬೋನಸ್ ಅನ್ನು ಒಮ್ಮೆಲೇ ಬರುವಂತೆ ಮಾಡಿದೆ.

ಅಂದು ನಾನು ವಿದೇಶದಿಂದ ಬರುತ್ತೇನೆ ಎಂಬುದನ್ನು ತಿಳಿಸಿ ಭೇಟಿಯಾಗೋಣ ಎಂದು ಕಳಿಸಿದ ಮೆಸೇಜ್ಗೆ ಸೀದಾ ಆಫೀಸ್ಸೆ ಹೋಗೋಣ ನಾನೇ ಪಿಕ್ ಮಾಡ್ತೀನಿ ಎಂದ ಭುಜಂಗನ ಮಗ. ಅಪ್ಪ ಸೇರಾದರೆ ಮಗ ಸವಾ ಸೇರು. ಕಾರಿನಲ್ಲೇ, 'ನೋಡ್ರಿ ನಮ್ಮಪ್ಪ ಕಷ್ಟ ಪಟ್ಟು ಮಾಡಿದ ಕಂಪನಿ ಇದು.. ಅವ್ರ್ ಇಲ್ದೆ ಇದ್ರೆ ಇಷ್ಟೆಲ್ಲಾ ಬೆಳೀತಾನೆ ಇರ್ತಿರ್ಲಿಲ್ಲ..' ಎನುತ ಪರೋಕ್ಷವಾಗಿ ಹೆದರಿಸತೊಡಗಿದ. ಅಂದುಕೊಂಡಂತೆಯೇ ಕೊಲ್ಲಲು ಸಿದ್ದವಾಗಿ ಬಂದಿದ್ದನಾತ! ರಾತ್ರಿ ಹತ್ತುವರೆಗೆ ಆಫೀಸಿಗೆ ಬಂದ ಕೂಡಲೇ ಗನ್ ಒಂದನ್ನು ತೆಗೆದು ನನ್ನ ಹಣೆಯ ಮೇಲಿಟ್ಟು ಟೇಬಲ್ಲಿನಲ್ಲಿದ ಕಾಗದ ಪತ್ರಗಳ ಮೇಲೆ ಸಹಿ ಮಾಡುವಂತೆ ಹೇಳಿದ. ಅಂತೆಯೇ ನಾನು ನನ್ನ ನಕಲಿ ಸಹಿಯನ್ನು ಮಾಡಿ ಇನ್ನೇನು ತಲೆಯೆತ್ತಬೇಕುವನ್ನುವಷ್ಟರಲ್ಲಿ ಆತನ ಗನ್ನನ್ನು ತಳ್ಳಿ ಆಣೆಯ ನೇರಕ್ಕೆ ಒಂದು ಬಲವಾದ ಗುದ್ದನು ಕೊಟ್ಟೆ. ಸೇಫ್ಟಿಗೆಂದು ತಂದಿದ್ದ ವಿಷ ಸಿಂಪಡಿಸಿದ ಕರ್ಚಿಫನ್ನು ಆತನ ಮೂಗಿನ ನೇರಕ್ಕೆ ಇರಿಸಿ ಪ್ರಜ್ಞೆ ತಪ್ಪಿಸಿದೆ. ಆದರೆ ವಿಷದ ಮತ್ತೊ ಅಥವ ಆತನ ಕೆಟ್ಟ ಗಳಿಗೆಯೋ ನಿಮಿಷಮಾತ್ರದಲ್ಲಿ ಆತನ ಪ್ರಾಣಪಕ್ಷಿ ಹಾರಿಹೋಯಿತು!! ಅಪ್ಪನನ್ನು ಸಾಯಿಸಲು ಹೋಗಿ ಮಗನನ್ನೇ ಪರಲೋಕಕ್ಕೆ ಕಳುಯಿಸಿದ ನನ್ನ ಎದೆ ನಡುಗತೊಡಗಿತು. ಕೆಲನಿಮಿಷಗಳಲ್ಲೇ ಇಹಸ್ಥಿತಿಗೆ ಬಂದ ನಾನು ಆತನ ಹೆಣವನ್ನು ಕಟ್ಟಿ ಊರೇ ಮಲಗಬಹುದಾದಷ್ಟು ದೊಡ್ಡದಾದ ಫ್ರಿಡ್ಜ್ ನ ಕೆಳ ಕಂಪಾರ್ಟ್ ಮೆಂಟ್ನ ಒಳಗೆ ತೂರಿಸಿ, ಗಟ್ಟಿಯಾದ ಕಲ್ಲಿನಂತೆ ಅಂಟುವ ಲಿಕ್ವಿಡ್ ನಿಂದ ನನ್ನದೇ ನಕಲಿ ಮುಖ ಚಹರೆಯನ್ನು ಆತನ ಮುಖಕ್ಕೆ ಅಂಟಿಸಿ ಫ್ರಿಡ್ಜ್ ನ ಕೀಲಿಯನ್ನು ಹಾಕಿದೆ.


ಆತನ ಮೊಬೈಲಿಂದ ಭುಜಂಗನಿಗೆ ಮೆಸೇಜ್ ಮಾಡಿದೆ.

Will be Continued...
 

No comments:

Post a Comment